4 Sept 2011

ಸ್ವಾಭಿಮಾನಕ್ಕೆ ದಕ್ಕೆ : ಬಿ. ಶ್ರೀರಾಮುಲು ರಾಜೀನಾಮೆ

ಬೆಂಗಳೂರು ಸೆ.04: ತಮ್ಮ ಸ್ವಾಭಿಮಾನಕ್ಕೆ ದಕ್ಕೆಯಾಗಿರುವ ಕಾರಣ ಮಾಜಿ ಸಚಿವ ಬಿ. ಶ್ರೀರಾಮುಲು ಇಂದು ಮಡಿಕೇರಿಗೆ ತೆರಳಿ ಸ್ಪೀಕರ್ ಬೋಪ್ಪಯ್ಯ ಅವರಿಗೆ ಪತ್ರ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಅವರು ಮಡಿಕೇರಿ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಲೋಕಾಯುಕ್ತರ ಬಗ್ಗೆ ನನಗೆ ಅಪಾರ ಗೌರವವಿದೆ. 20 ವರ್ಷಗಳಿಂದ ರಾಜಕೀಯ ಸೇವೆ ಮಾಡಿಕೊಂಡು ಬಂದಿರುವ ನಾನು ಪ್ರಾಮಾಣಿಕ, ಯಾವುದೇ ಕಳಂಕ ಇಲ್ಲದವನು. ಅಕ್ರಮ ಗಣಿಗಾರಿಕೆಯಲ್ಲಿ ಖಂಡಿತ ಭಾಗಿಯಾಗಿಲ್ಲ. ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳು ನನಗೆ ಸಾಕಷ್ಟು ನೋವನ್ನು ತಂದಿದೆ. ಕಾರಣ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು. ನನ್ನ ಜತೆ ಬಳ್ಳಾರಿ ಅನೇಕ ಶಾಸಕರು ನನ್ನೊಂದಿಗೆ ಇದ್ದಾರೆ. ಆದರೆ ನಾನೊಬ್ಬ ಮಾತ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿದರು.

0 comments:

Post a Comment

Share

Twitter Delicious Facebook Digg Stumbleupon Favorites More