7 Sept 2011

ಜನಾರ್ದನ ರೆಡ್ಡಿ ಅರ್ಜಿ ವಿಚಾರಣೆ ಗುರುವಾರಕ್ಕೆ

ಹೈದರಾಬಾದ್ ಸೆ.7:ಅಕ್ರಮ ಗಣಿಗಾರಿಕೆ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ ರೆಡ್ಡಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.ಸಿಬಿಐ ವಿಚಾರಣೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ವಹಿಸಬೇಕು ಎಂದು ಮನವಿ ಸಲ್ಲಿಸಿದರೆ ರೆಡ್ಡಿಗಳಿಗೆ ಜಾಮೀನು ಸಿಗುವುದು ಕಷ್ಟ.ಕ್ರಿಮಿನಲ್ ಸಂಚು ಆರೋಪವೊಂದನ್ನು ಬಿಟ್ಟರೆ ಉಳಿದೆಲ್ಲ ಆರೋಪಗಳಿಗೂ ಜಾಮೀನು ಮಂಜೂರು ಮಾಡುವ ಅವಕಾಶವಿರುತ್ತದೆ.ವಿಚಾರಾಧೀನ ಖೈದಿಗಳಿಗೆ ನಿಯಮದ ಪ್ರಕಾರ ಆಹಾರ ನೀಡಲಾಗುತ್ತಿದೆ.ಜನಾರ್ದನ ರೆಡ್ಡಿ ಅವರು ಜೈಲಿನಲ್ಲಿ ವಿಶೇಷ ಸೌಲಭ್ಯಗಳಿಗೆ ಮನವಿ ಸಲ್ಲಿಸಿಲ್ಲ.

0 comments:

Post a Comment

Share

Twitter Delicious Facebook Digg Stumbleupon Favorites More