9 Sept 2011

ಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಬಂಧನ


ಕೌಟುಂಬಿಕ ಕಲಹದಿಂದಾಗಿ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಮೂರು ವರ್ಷದ ಪುತ್ರನ ಮೇಲೆ ನಡು ರಾತ್ರಿ 12 ಗಂಟೆ ವೇಳೆ ವಿಜಯನಗರದ ತನ್ನ ಗೆಳತಿಯಮನೆಯಲ್ಲಿದ್ದ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ವಿಜಯನಗರ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ.
ಕನ್ನಡದ ಖ್ಯಾತ ನಟ, ದಿವಂಗತ ತೂಗುದೀಪ ಶ್ರೀನಿವಾಸ್ ಅವರ ಪುತ್ರ ದರ್ಶನ್ ಅವರು ತಮ್ಮ ಪತ್ನಿಗೆ ರಿವಾಲ್ವರ್ ತೋರಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ತೀವ್ರ ವಾಗಿ ಗಾಯಗೊಂಡಿರುವ ವಿಜಯಲಕ್ಷ್ಮಿ ಮತ್ತು ಪುತ್ರನನ್ನು ವಿಜಯನಗರದ ಗಾಯತ್ರಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ.
ಈ ಮಧ್ಯೆ, ಸಕಲೇಶಪುರದಲ್ಲಿ ನಡೆಯುತ್ತಿದ್ದ ದರ್ಶನ್ ತಾರಾಗಣದ 'ಚಿಂಗಾರಿ' ಸಿನಿಮಾ ಚಿತ್ರೀಕರಣವನ್ನು ರದ್ದುಪಡಿಸಲಾಗಿದೆ.
ದಂಪತಿ ಮಧ್ಯೆ ಇತ್ತೀಚೆಗೆ ವಿರಸ ನೆಲೆಸಿತ್ತು. ರಾಜರಾಜೇಶ್ವರಿ ನಗರದಲ್ಲಿರುವ ಗಂಡನ ಮನೆಯಿಂದ ವಿಜಯನಗರದಲ್ಲಿರುವ ಸ್ನೇಹಿತೆ ವಿದ್ಯಾ ಮನೆಗೆ ವಿಜಯಲಕ್ಷ್ಮಿ ಬಂದಿದ್ದರು. ಆದರೆ ಅಲ್ಲಿಗೇ ತೆರಳಿದ ದರ್ಶನ್, ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಐಪಿಸಿ ಸೆಕ್ಷನ್ 301, 498 ಎ, ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆಯಡಿ ನಟ ದರ್ಶನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತಕ್ಷಣ ಅವರನ್ನು ಕೋರ್ಟಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

0 comments:

Post a Comment

Share

Twitter Delicious Facebook Digg Stumbleupon Favorites More