ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

9 Sept 2011

ಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಬಂಧನ


ಕೌಟುಂಬಿಕ ಕಲಹದಿಂದಾಗಿ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಮೂರು ವರ್ಷದ ಪುತ್ರನ ಮೇಲೆ ನಡು ರಾತ್ರಿ 12 ಗಂಟೆ ವೇಳೆ ವಿಜಯನಗರದ ತನ್ನ ಗೆಳತಿಯಮನೆಯಲ್ಲಿದ್ದ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ವಿಜಯನಗರ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ.
ಕನ್ನಡದ ಖ್ಯಾತ ನಟ, ದಿವಂಗತ ತೂಗುದೀಪ ಶ್ರೀನಿವಾಸ್ ಅವರ ಪುತ್ರ ದರ್ಶನ್ ಅವರು ತಮ್ಮ ಪತ್ನಿಗೆ ರಿವಾಲ್ವರ್ ತೋರಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ತೀವ್ರ ವಾಗಿ ಗಾಯಗೊಂಡಿರುವ ವಿಜಯಲಕ್ಷ್ಮಿ ಮತ್ತು ಪುತ್ರನನ್ನು ವಿಜಯನಗರದ ಗಾಯತ್ರಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ.
ಈ ಮಧ್ಯೆ, ಸಕಲೇಶಪುರದಲ್ಲಿ ನಡೆಯುತ್ತಿದ್ದ ದರ್ಶನ್ ತಾರಾಗಣದ 'ಚಿಂಗಾರಿ' ಸಿನಿಮಾ ಚಿತ್ರೀಕರಣವನ್ನು ರದ್ದುಪಡಿಸಲಾಗಿದೆ.
ದಂಪತಿ ಮಧ್ಯೆ ಇತ್ತೀಚೆಗೆ ವಿರಸ ನೆಲೆಸಿತ್ತು. ರಾಜರಾಜೇಶ್ವರಿ ನಗರದಲ್ಲಿರುವ ಗಂಡನ ಮನೆಯಿಂದ ವಿಜಯನಗರದಲ್ಲಿರುವ ಸ್ನೇಹಿತೆ ವಿದ್ಯಾ ಮನೆಗೆ ವಿಜಯಲಕ್ಷ್ಮಿ ಬಂದಿದ್ದರು. ಆದರೆ ಅಲ್ಲಿಗೇ ತೆರಳಿದ ದರ್ಶನ್, ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಐಪಿಸಿ ಸೆಕ್ಷನ್ 301, 498 ಎ, ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆಯಡಿ ನಟ ದರ್ಶನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತಕ್ಷಣ ಅವರನ್ನು ಕೋರ್ಟಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

Share

Twitter Delicious Facebook Digg Stumbleupon Favorites More