ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

12 Sept 2011

ಕ್ರಿಕೆಟ್ : ಭಾರತಕ್ಕೆ ಸರಣಿ ಸೋಲು

ಲಂಡನ್, ಸೆ.11: ಸತತವಾಗಿ ಏಕದಿನ ಪಂದ್ಯಗಳಲ್ಲಿ ಸೋತು ಸುಣ್ಣವಾಗಿರುವ ಭಾರತಕ್ಕೆ ಮತ್ತೊಂದು ಆಘಾತ. ನಿನ್ನೆ ನಡೆದ 4ನೇ ಟೆಸ್ಟ್ ಕ್ರಿಕೆಟ್‌ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ 50 ಓವರುಗಳಲ್ಲಿ 5 ವಿಕೆಟ್ ನಷ್ಟಕ್ಕೆ 280 ಗಳಿಸಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ 48.5 ಓವರಗಳಲ್ಲಿ 6 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದ್ದಾಗ ಮಳೆಯಿಂದ ಪಂದ್ಯ ರದ್ಡಾಯಿತು. ಡಕ್-ವರ್ತ ನಿಯಮದ ಪ್ರಕಾರ ಇಂಗ್ಲೆಂಡ್ ಅಷ್ಟೇ ಓವರಗಳಲ್ಲಿ 270 ರನ ಗಳಿಸಿದ್ದರಿಂದ ಪಂದ್ಯ ಟೈ ಎಂದು ಘೋಷಿಸಲಾಯಿತು. ಇದಕ್ಕಿಂತ ಮೊದಲು ಮೂರು ಸಲ ಮಳೆಯಿಂದ ಆಟ ನಿಂತಿತ್ತು. ಇದರಿಂದ ಭಾರತ ಸರಣಿ ಸೋಲು ಅನುಭವಿಸಿದೆ. ಪಂದ್ಯಪುರುಷೋತ್ತಮ ಪ್ರಶಸ್ತಿಯನ್ನು ಜಂಟಿಯಾಗಿ ಸುರೇಶ ರೈನಾ ಹಾಗೂ ರವಿ ಬೋಪಾರಾಗೆ ನೀಡಲಾಯಿತು. ಮಳೆ ಬಂದು ಎಲ್ಲಾ ಹಾಳು ಮಾಡುಬಿಟ್ಟಿತು ಎಂದು ನಾಯಕ ಧೋನಿ ಹೇಳಿದ್ದಾರೆ.

ನಿರ್ಮಾಪಕರ ಸಂಘದ ಕ್ರಮ : ಎತ್ತಿಗೆ ಜ್ವರ ಎಮ್ಮೆಗೇ ಬರೆ

ಬೆಂಗಳೂರು ಸೆ 11: ನಟಿ ನಿಖಿತಾರವರನ್ನು ಕನ್ನಡ ಚಲನಚಿತ್ರ ರಂಗದಿಂದ ಮೂರು ವರ್ಷಗಳ ಕಾಲ ನಿಷೇಧಿಸಿರುವ ಕ್ರಮ ಕ್ರಮ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೈತಿಕ ದಿವಾಳಿತನವನ್ನು ಎತ್ತಿ ತೋರಿಸಿದೆ.ತಮ್ಮ ಪತ್ನಿಯೊಂದಿಗೆ ಅತ್ಯಂತ ಹೀನಾಯವಾಗಿ ವರ್ತಿಸಿರುವ ನಟನನ್ನು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ನಿಷೇಧಿಸುವ ದಿಟ್ಟತನವನ್ನು ತೋರಿಸಬೇಕಾಗಿತ್ತು. ಅದು ಬಿಟ್ಟು ಎತ್ತಿಗೆ ಜ್ವರ ಎಮ್ಮೆಗೇ ಬರೆ ಹಾಕಿದಂತಾಗಿದೆ ನಿರ್ಮಾಪಕರ ಸಂಘದ ಈ ಕ್ರಮ.
ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಸಂಬಂಧ ಕೆಲ ತಿಂಗಳಿಂದ ಹಳಸಿತ್ತು ಎನ್ನಲಾಗಿದೆ. ಇದಕ್ಕೆ ಕಾರಣಗಳು ಬಹಿರಂಗವಾಗಿಲ್ಲ. ನಿಖಿತಾ ಜತೆಗೆ ದರ್ಶನ್ ಸ್ನೇಹ ಮುಂದುವರಿಸಿದ್ದೇ ದಂಪತಿ ನಡುವಣ ವೈಮನಸ್ಯಕ್ಕೆ ಕಾರಣವಾಯಿತು ಎನ್ನುತ್ತವೆ ಚಿತ್ರರಂಗದ ಮೂಲಗಳು. ನಿಖಿತಾ ಪ್ರೇಮಪಾಶದಲ್ಲಿ ಸಿಲುಕಿದ ದರ್ಶನ್, ಧರ್ಮಪತ್ನಿ ವಿಜಯಲಕ್ಷ್ಮಿ ಜತೆಗಿನ ಸಂಬಂಧವನ್ನು ಕಡೆಗಣಿಸುತ್ತಾ ಬಂದಿದ್ದರು. ಇಬ್ಬರ ನಡುವೆ ಕಲಹವೂ ನಡೆಯುತ್ತಿತ್ತು.

Share

Twitter Delicious Facebook Digg Stumbleupon Favorites More