ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

26 Oct 2011

ಪಟಾಕಿಯ ಅನಾಹುತಕ್ಕೆ ಐದು ಪರಿಹಾರಗಳು

ದೀಪಾವಳಿ ಸಂಭ್ರಮ ಮೂರು ದಿನ ಮನೆಮನಗಳಲ್ಲಿ ತುಂಬಿರುತ್ತೆ. ಜೊತೆಗೆ ಎಲ್ಲೆಲ್ಲೂ ಪಟಾಕಿಗಳ ಅಬ್ಬರ ಜೋರಿರುತ್ತೆ. ಆದರೆ ಈ ಖುಷಿಯ ಹೊರತಾಗಿ ಆರೋಗ್ಯ ಸಮಸ್ಯೆಯತ್ತ ಯೋಚಿಸಿದರೆ ಪಟಾಕಿಯಿಂದ ಆರೋಗ್ಯದ ಮೇಲೆ ಎಂತಹ ಪರಿಣಾಮ ಬೀರುತ್ತದೆ ಎಂಬ ಸಂಪೂರ್ಣ ಅರಿವಾಗುತ್ತದೆ.

ಉಸಿರಾಟದ ತೊಂದರೆ, ಹೃದ್ರೋಗಿಗಳು, ಹಸುಗೂಸು, ಪುಟ್ಟ ಮಕ್ಕಳು ಈ ಸಮಯದಲ್ಲಿ ಹೆಚ್ಚು ಜಾಗ್ರತೆಯಿಂದಿರಬೇಕು. ಇಲ್ಲದಿದ್ದರೆ ಈ 3 ದಿನಗಳ ಅವಧಿ ಉಂಟಾಗುವ ಪ್ರದೂಷಣೆ ಪರಿಣಾಮ ಜೀವನವಿಡೀ ಉಳಿದುಕೊಳ್ಳಬಹುದು.

ಪಟಾಕಿ ಹೊಗೆ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

1. ಪಟಾಕಿ ಹೊಗೆಯಿಂದ ಮಕ್ಕಳ ಮೂಗು ಮತ್ತು ಗಂಟಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಸೂಕ್ಷ್ಮ ಆರೋಗ್ಯವುಳ್ಳ ಮಕ್ಕಳಲ್ಲಿ ಊತವೂ ಕಾಣಿಸಿಕೊಳ್ಳುತ್ತೆ. ಕೆಮ್ಮು ಆರಂಭವಾಗಿ ಎದೆ ಉರಿಯಾಗುತ್ತದೆ.

2. ಪಟಾಕಿ ಹೊಗೆಯಿಂದ ಕಣ್ಣಿನಲ್ಲಿ ಉರಿ ಉಂಟಾಗಿ ಕಣ್ಣು ಕೆಂಪಗಾಗುವಂತೆ ಮಾಡುತ್ತದೆ. ಎಲ್ಲಾ ವಯೋಮಾನದವರಲ್ಲೂ ಈ ಪರಿಣಾಮ ಗೋಚರಿಸುತ್ತದೆ. ಇದರ ಶಬ್ದ ಕಿವಿಯ ತಮಟೆಯ ಶಕ್ತಿಯನ್ನೂ ಕುಂದಿಸುತ್ತದೆ.

3. ಪಟಾಕಿಗಳನ್ನು ಸಿಡಿಸುವುದರಿಂದ ಬಿಪಿಯಿಂದ ಬಳಲುತ್ತಿದ್ದವರಲ್ಲಿ ರಕ್ತದೊತ್ತಡ ಹೆಚ್ಚಾಗುತ್ತದೆ. ತಲೆಸುತ್ತು, ತಲೆ ನೋವು ಮತ್ತು ತಲೆ ತಿರುಗುವುದು ಈ ಪರಿಣಾಮಗಳು ನಂತರ ಗೋಚರಿಸಲು ಪ್ರಾರಂಭವಾಗುತ್ತದೆ.

4. ಪಟಾಕಿ ಹೊಗೆಯಿಂದ ಶ್ವಾಸಕೋಶದ ತೊಂದರೆ ಉಂಟಾಗಿ ಕೆಮ್ಮು, ಸೀನು ಹೆಚ್ಚಾಗುತ್ತದೆ. ಅಲ್ಲದೆ ಅಸ್ತಮಾ ರೋಗಿಗಳು ಈ ಸಮಯದಲ್ಲಿ ಪಟಾಕಿ ವಾತಾವರಣದಿಂದ ದೂರವಿದ್ದರೆ ಉತ್ತಮ. ಇಲ್ಲದಿದ್ದರೆ ತೊಂದರೆ ಉಲ್ಬಣವಾಗುವ ಸಾಧ್ಯತೆಯೇ ಹೆಚ್ಚು.

5. ಈ ವಿಷಕಾರಿ ಅನಿಲವನ್ನು ಗರ್ಭಿಣಿಯರು ಸೇವಿಸಿದರೆ ತಾಯಿಗೆ ಮತ್ತು ಹುಟ್ಟಲಿರುವ ಮಗುವಿಗೆ, ಇಬ್ಬರಿಗೂ ತೊಂದರೆ, ಹುಟ್ಟುತ್ತಲೇ ಉಸಿರಾಟದ ತೊಂದರೆಗೆ ಮಗು ಒಳಗಾಗಬಹುದು. ಆದ್ದರಿಂದ ಈ ಸಮಯದಲ್ಲಿ ಗರ್ಭಿಣಿಯರು ಜಾಗ್ರತೆ ವಹಿಸಲೇಬೇಕು. ಮಾನಸಿಕವಾಗಿ ಮತ್ತು ದೈಹಿಕವಾಗಿ ಇದು ತೊಂದರೆಗೀಡುಮಾಡಬಹುದು.

Share

Twitter Delicious Facebook Digg Stumbleupon Favorites More