ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

28 Sept 2012

ಕರ್ನಾಟಕಕ್ಕೆ ನೀರು ಕುಡಿಸಿ ತ.ನಾಡಿಗೆ ಕಾವೇರಿ ಹರಿಸಲು ಸುಪ್ರಿಂಕೋರ್ಟ್ ಆದೇಶ....!!!!!

ಬೆಂಗಳೂರು,ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೊಮ್ಮೆ ಕರ್ನಾಟಕಕ್ಕೆ ಪೆಟ್ಟುಬಿದ್ದಿದೆ.ಕರ್ನಾಟಕದಲ್ಲಿ  ತೀವ್ರ ಬರಗಾಲದ ಪರಿಸ್ಟಿತಿ ಎದುರಾಗಿದ್ದರೂ  ಮೊದಲು ತಮಿಳುನಾಡಿಗೆ ದಿನಾ ಇಂತಿಷ್ಟು ಅಂತ ಕಾವೇರಿ ನೀರು ಬಿಡಬೇಕು ಎಂದು  ಸುಪ್ರೀಂಕೋರ್ಟ್ಆದೇಶಿಸಿದೆ.
ಕಾವೇರಿ ನದಿ ಪ್ರಾಧಿಕಾರವು ಇತ್ತೀಚೆಗೆ ಸೂಚಿಸಿರುವಂತೆ ನೀರು ಬಿಡಿ ಎಂದು ಶುಕ್ರವಾರ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ. ಇದರಿಂದ ದಿನಾ 9 ಸಾವಿರ ಕ್ಯುಸೆಕ್ಸ್ ನೀರನ್ನು ಅಕ್ಟೋಬರ್ 21ರವರೆಗೂ ತಮಿಳುನಾಡಿನತ್ತ ಹರಿಸಬೇಕಾದ ಅನಿವಾರ್ಯತೆಗೆ ಕರ್ನಾಟಕ ಸಿಲುಕಿದೆ. 
ಕರ್ನಾಟಕಕ್ಕೆ ನೀರು ಕುಡಿಸಿದ ಸು.ಕೋರ್ಟ್: ಕಾವೇರಿ ನದಿ ಪ್ರಾಧಿಕಾರದ ಆದೇಶವನ್ನು ಪರಿಪಾಲಿಸದ ಕರ್ನಾಟಕವನ್ನು ಸು.ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ವಕೀಲರು ಈ ಹಿಂದೆಯೇ ರಾಜ್ಯವನ್ನು ಎಚ್ಚರಿಸಿದ್ದರು. 
ಸೆ. 19ರಂದು ದೆಹಲಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ಕಾವೇರಿ ಪ್ರಾಧಿಕಾರ ಸಭೆಯ ಆದೇಶದಂತೆ ಕರ್ನಾಟಕ ದಿನಾ ನಮಗೆ 9 ಸಾವಿರ ಕ್ಯುಸೆಕ್ಸ್ ನೀರು ಬಿಡಬೇಕು. ಆದರೆ ಅದು ಪ್ರಾಧಿಕಾರದ ಆದೇಶವನ್ನು ಪಾಲಿಸುತ್ತಿಲ್ಲ. ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿ ಎಂದು ತಮಿಳುನಾಡು ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ತಮಿಳುನಾಡಿಗೆ ಕಾವೇರಿ ನೀರು ಹರಿಸಲು  ಸುಪ್ರಿಂಕೋರ್ಟ್ ಆದೇಶ ನೀಡಿದೆ.ಕರ್ನಾಟಕ ಅನಿವಾರ್ಯವಾಗಿ ಕಾವೇರಿ ನೀರು ಬಿಡಲೇಬೆಕಾಗಿದೆ. ಸಕಾಲಕ್ಕೆ ಮಳೆ ಬೆಳೆ ಬಾರದೆ ಬೆಲೆ ಏರಿಕೆಯಿಂದಾಗಿ ತತ್ತರಿಸಿರುವ ರೋಸಿ ಹೋಗಿರುವ ಕರ್ನಾಟಕದ ಜನತೆಗೆ ನುಂಗಲಾರದ ತುತ್ತಾಗಿದೆ.ಒಟ್ಟಿನಲ್ಲಿ ಸುಪ್ರಿಂಕೋರ್ಟ್ ಕರ್ನಾಟಕಕ್ಕೆ ನೀರು ಕುಡಿಸಿದೆ...!!!!  

11 Sept 2012

ಭಾರತದ ಕ್ಷೀರ ಕ್ರಾಂತಿಯ ಹರಿಕಾರ ವರ್ಗೀಸ್ ಕುರಿಯನ್ ವಿಧಿವಶ....!!!!


 ಭಾರತದ ಕ್ಷೀರ ಕ್ರಾಂತಿಯ ಹರಿಕಾರ,ಪಿತಾಮಹ  ‘ಹಾಲಿನ ಮನುಷ್ಯ’ ಎಂದು ಖ್ಯಾತಿ ಪಡೆದಿದ್ದ ಡಾ.ವರ್ಗೀಸ್ ಕುರಿಯನ್ ರವಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಗುಜರಾತನ ಪಟೇಲ್ ಯುರೋಲಾಜಿಕಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ರ ವಾರ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.
1921ರ ನವೆಂಬರ್ 26ರಂದು ಕೇರಳದ ಕೋಝಿಕ್ಕೋಡ್‌ನಲ್ಲಿ ಜನಿಸಿದ ಅವರು, ಗುಜರಾತ್ ಸಹಕಾರಿ ಹಾಲು ಒಕ್ಕೂಟ(ಜಿಸಿಎಂಎಂಎಫ್) ಹುಟ್ಟು ಹಾಕಿದರಲ್ಲದೆ, ಅದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಹೈನುಗಾರಿಕೆ ಮಾಡುವ ರೈತರಿಗೆ ಆಶಾದಾಯಕರಾದ ಕುರಿಯನ್  
 ಜೀವಮಾನದಲ್ಲೆಂದೂ ಒಂದು ತೊಟ್ಟು ಹಾಲನ್ನು ಕುಡಿಯದ ಡಾ. ವರ್ಗಿಸ್ ಕುರಿಯನ್ ಎಂಬ ಶ್ವೇತಕ್ರಾಂತಿಯ ಹರಿಕಾರನೇ ಈ ಅಮೂಲ್ ಬೇಬಿಯ ಅಪ್ಪ-ಅಮ್ಮ.  ಡಾ. ಕುರಿಯನ್ ಅವರ ಅಮೂಲ್ ಹಾಲು ಇಂದು ಭಾರತದಾದ್ಯಂತ ಅತೀ ಹೆಚ್ಚು ಬಳಕೆಯಾಗುತ್ತಿದೆ. 
ಜಸಿಎಂಎಂಎಫ್ ದೇಶದ ಅತೀ ದೊಡ್ಡ ಹಾಲು ಉತ್ಪಾದನೆ ಹಾಗೂ ಶೇಖರಣಾ ಘಟಕವೆಂಬ ಖ್ಯಾತಿ ಪಡೆದಿದೆ. ‘ಆಮುಲ್’ ಬ್ರಾಂಡ್‌ನಲ್ಲಿ ಇದರ ಉತ್ಪನ್ನಗಳು ಇಂದು ದೇಶಾದ್ಯಂತ ಖ್ಯಾತಿ ಪಡೆದಿವೆ.
ವಿಶ್ವ ಆಹಾರ ಪ್ರಶಸ್ತಿ, ಮ್ಯಾಗ್ಸೇಸೆ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದ ಇವರಿಗೆ ಪದ್ಮಶ್ರೀ (1965), ಪದ್ಮಭೂಷಣ (1966), ಪದ್ಮವಿಭೂಷಣ (1999) ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದು ಬಂದಿವೆ ಕುರಿಯನ್ ಅವರ ಚರಿತ್ರೆಯ ಪುಟಗಳನ್ನು ಓದುತ್ತಾ ಹೋದರೆ ಗ್ರಾಮಾಂತರ ಭಾರತ ಹೈನೋದ್ಯಮದ ಮೂಲಕ ಹೇಗೆಲ್ಲ ಪ್ರಗತಿಯನ್ನು ಕಂಡಿತು ಎಂಬುದನ್ನು ತಿಳಿಯಬಹುದು.ಇಂತಹ ಮಹಾನ ಪ್ರಸಿದ್ದ ವ್ಯಕ್ತಿಯನ್ನು ಭಾರತ ಇಂದು ಕಳೆದುಕೊಂಡಿದೆ.  ಅವರ ಆತ್ಮಕ್ಕೆ   ಚಿರಶಾಂತಿ  ಸಿಗಲಿ.....!!!!!!!!   

Share

Twitter Delicious Facebook Digg Stumbleupon Favorites More