ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

14 Feb 2012

ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ವಿ.ಎಸ್ ಆಚಾರ್ಯ ವಿಧಿವಶ..!!

ಬೆಂಗಳೂರ:ಕರ್ನಾಟಕದ ಉನ್ನತ ಶಿಕ್ಷಣ ಸಚಿವ ವಿ.ಎಸ್ ಆಚಾರ್ಯರವರು ಇಂದು ಮುಂಜಾನೆ ಬೆಂಗಳೂರಿನ ಸರ್ಕಾರಿ  ನೃಪತುಂಗಾ ಕಾಲೇಜಿನ ವಿಚಾರ ಸಂಕೀರ್ಣ ಕಾರ್ಯಕ್ರಮವೊಂದರಲ್ಲಿ ವೇದಿಕೆ ಏರುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಪ್ರಜ್ಞಾಹಿನರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇವರು ಪತ್ನಿ ಹಾಗು 4 ಪುತ್ರರು 1 ಪುತ್ರಿಯನ್ನು ಅಗಲಿದ್ದಾರೆ.ಇವರು 1940 ರಲ್ಲಿ ಉಡುಪಿಯಲ್ಲಿ ಜನಿಸಿ 1968 ರಲ್ಲಿ ಮೊದಲು ರಾಜಕೀಯ ಪ್ರವೇಶಿಸಿದ್ದರು.ನಂತರ 1983 ರಲ್ಲಿ ಉಡುಪಿಯ ಶಾಸಕರಾಗಿದ್ದರು 1996 ರಲ್ಲಿ ವಿಧಾನ ಪರಿಷತ ಅದ್ಯಕ್ಷರಾಗಿ,2006 ರಲ್ಲಿ ಗ್ರಹಸಚಿವರಾಗಿ,2010 ರಿಂದ  ಉನ್ನತಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.ಇವರು ಸಚಿವರಾಗಿ 6 ವರ್ಷ ಕಾರ್ಯ ನಿರ್ವಹಿಸಿದ್ದಾರೆ.ಎಂ ಬಿ ಬಿ ಎಸ್ ಪದವಿ ಪಡೆದು ರಾಜಕೀಯದಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.ಪ್ರಾಮಾಣಿಕ,ನಿಷ್ಟಾವಂತ ಧಿಮಂತ ರಾಜಕಾರಣಿಯಾಗಿ ಕಾರ್ಯನಿರ್ವಹಿಸಿದ್ದರು.ಕರ್ನಾಟಕದ ಮುಖ್ಯ ಮಂತ್ರಿ ಸದಾನಂದಗೌಡ ಮಾತನಾಡಿ ಸದಾ ರಾಜ್ಯದ ಅಭಿವೃದ್ದಿಯ ಬಗ್ಗೆ ಚಿಂತಿಸುತ್ತಿದ್ದ ಅಪರೂಪದ ನಿಷ್ಟಾವಂತ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ ಎಂದು ಕಂಬನಿ ಮಿಡಿದರು ಹಾಗು ಬಿ ಜೆ ಪಿ ಯ ಎಲ್ಲ ಶಾಸಕರು ,ರಾಜಕೀಯ ಗಣ್ಯರು ಅಂತಿಮ ನಮನ  ಸಲ್ಲಿಸಿ ಸಂತಾಪ ಸೂಚಿಸಿದರು.ಇಂದು ಅವರ ಅಂತ್ಯ ಸಂಸ್ಕಾರ ಉಡುಪಿಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ   ನೆರವೇರಲಿದೆ.ನಮ್ಮನೆಲ್ಲ  ಅಗಲಿದ ಡಾ.ವಿ .ಎಸ್ .ಆಚರ್ಯರವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ..!!             

Share

Twitter Delicious Facebook Digg Stumbleupon Favorites More