ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

16 Feb 2012

ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ 35 ನೇ ಹುಟ್ಟು ಹಬ್ಬದ ಸಂಭ್ರಮ..!!

ಸ್ಯಾಂಡಲ್ ವುಡನ ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ ಇಂದು 35 ನೇ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಲ್ಲೂ ಕನ್ನಡದ  ಅಭಿಮಾನಿಗಳ ಹರ್ಷೋದ್ಗಾರ ಸಂತಸ ತುಂಬಿತುಳುಕುತ್ತಿದೆ. ಮುಂಜಾನೆಯಿಂದಲೇ ದರ್ಶನ್ ಮನೆ ಮುಂದೆ ಹುಟ್ಟು ಹಬ್ಬದ ಶುಭಾಷಯ ಕೋರಲು ಅಭಿಮಾನಿಗಳ ಮಹಾಪುರಾವೆ ಹರಿದು ಬಂದಿದ್ದು  ದರ್ಶನ್ ಗೂ ಸಂತಸ ತಂದಿದೆ  ಅದರೊಂದಿಗೆ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.ಕನ್ನಡ ಚಿತ್ರ ರಂಗದಲ್ಲಿ ಅವರ ಸಾರಥಿ ಚಿತ್ರ ನಿರೀಕ್ಷೆಗೂ ಮಿರಿ ಭಾರಿ ಹಣ ಗಳಿಸಿದ್ದು ಈಗ ಅವರ ಮತ್ತೊಂದು ಚಿತ್ರ 'ಚಿಂಗಾರಿ' ಬಿಡುಗಡೆಗೊಂಡಿದ್ದು ಯಶಸ್ವಿಯುತವಾಗಿ ಪ್ರದರ್ಶನಗೊಳ್ಳುತ್ತಿದೆ.ಅಲ್ಲದೆ  ಅವರು ಮಾದ್ಯಮದವರೊಂದಿಗೆ ಮಾತನಾಡಿ ಈಗ ನನ್ನ ಪತ್ನಿಯೊಂದಿಗೆ ನೆಮ್ಮದಿಯಿಂದ ಬದುಕು ಸಾಗಿಸುತ್ತಿದ್ದೇನೆ ಎಂದು ಹೇಳಿದ್ದಾರೆ.ತಮ್ಮ ಯಶಸ್ಸಿಗೆ ತಾಯಿಯೇ ಪ್ರೇರಣೆ ಎಂದರು  ಅಷ್ಟೇ ಅಲ್ಲ ಅವರ ಪತ್ನಿ ವಿಜಯಲಕ್ಷ್ಮಿದರ್ಶನ್ ಅವರ ಬರ್ತ್ ಡೇ ಗೆ 'ಜಾಗ್ವಾರ್' ಕಾರ್ ನ್ನು ಗಿಫ್ಟ್ ಆಗಿ ಕೊಟ್ಟಿದ್ದಾರೆ.ಅವರ ತಾಯಿ  ಕೂಡ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ ಹಾಗೆ ಇನ್ನು ಅವರಿಗೇ ಚಿತ್ರ ರಂಗದಲ್ಲಿ ಹೆಚ್ಹು ಹೆಚ್ಹು ಅವಕಾಶಗಳು ದೊರೆಯಲಿ ಎಂಬುದು ಕನ್ನಡಿಗರ ಆಶಯ.ಏನೇ ಅಗಲಿ ಯಶಸ್ಸಿನತ್ತ ಹೆಜ್ಜೆ ಹಾಕುತ್ತಿರುವ ದರ್ಶನಗೆ ಮತ್ತೊಮ್ಮೆ  ಹುಟ್ಟು ಹಬ್ಬದ ಶುಭಾಶಯಗಳು..!ಒಟ್ಟಿನಲ್ಲಿ ದೇವರು ಅವರಿಗೆ ಆಯಸ್ಸು ಆರೋಗ್ಯವನ್ನು ನೀಡಿ ಕಾಪಾಡಲಿ ಎಂಬುದು ಅಭಿಮಾನಿಗಳ ಶುಭ ಹಾರೈಕೆ..!              

Share

Twitter Delicious Facebook Digg Stumbleupon Favorites More