ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

20 Jan 2013

ಲಂಕಾದ ಖ್ಯಾತ ಕ್ರಿಕೆಟಿಗ ದಿಲ್ಶಾನ್ ವಿರುದ್ಧ ಪ್ರಕರಣ ದಾಖಲು..!!



ಶ್ರೀಲಂಕಾ ತಂಡದ ಖ್ಯಾತ  ಬ್ಯಾಟ್ಸ್‌ಮನ್‌ ತಿಲಕರತ್ನೆ ದಿಲ್ಶನ್‌ ಮನೆಯಲ್ಲಿ ಅಳವಡಿಸಿಕೊಂಡಿರುವ ಸಿಸಿಟಿವಿ ಕ್ಯಾಮರಾ ತಮ್ಮ ಮನೆಯ ಈಜುಕೊಳದ ಮುಖವಾಗಿ ಅಳವಡಿಸಲಾಗಿದೆ ಎಂದು ಎದುರುಗಡೆ ಮನೆಯ  ಮಹಿಳೆಯೊಬ್ಬರು ಪೊಲೀಸ್‌ ದೂರು ಸಲ್ಲಿಸಿದ್ದಾರೆ.

ದಿಲ್ಶನ್‌ ವಾಸವಾಗಿರುವ ಪಕ್ಕದ ಮನೆಯಲ್ಲಿ ರೇಣುಕಾ ಡಿ ಕೋಸ್ಟಾ ಎಂಬುವವರು  ವಾಸವಾಗಿದ್ದು, ಅವರು ಮಿರಿಹಾನ ಪೊಲೀಸ್‌ ಸ್ಟೇಸನ್‌ನಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಈಗಾಗಲೇ ಪರಿಶೀಲನೆ ನಡೆಸಿದ್ದಾರೆ ಮತ್ತು ಸಿಸಿಟಿವಿ ಕ್ಯಾಮರಾ ಈಜುಕೊಳ ಮುಖವಾಗಿ ಅಳವಡಿಸಲಾಗಿರುವುದು ಸತ್ಯ ಎಂಬ ಸುದ್ದಿ ಹರಿದಾಡುತ್ತಿದ್ದೆ.

ಮತ್ತೊಂದು  ವರದಿಯ ಪ್ರಕಾರ ಪೊಲೀಸರು ದಿಲ್ಶನ್‌ ಮನೆಯಲ್ಲಿ ಅಳವಡಿಸಿರುವ ಸಿಸಿಟಿವಿಯನ್ನು ಪರಿಶೀಲಿಸಿದ್ದು, ಅದು ಈಜುಕೊಳದ ಮುಖವಾಗಿ ಅಳವಡಿಸಿಲ್ಲ ಎಂದು ತಿಳಿಸಲಾಗಿದೆ. ರೇಣುಕಾ ಪತಿ ಇರಾಕ್‌ನಲ್ಲಿ ಉದ್ಯೋದಲ್ಲಿದ್ದು, ತನ್ನ ಎರಡು ಶಾಲಾ ಮಕ್ಕಳ ಜತೆ ವಾಸವಾಗಿದ್ದಾರೆ. ದಿಲ್ಶನ್‌ ಮತ್ನಿ ಮಂಜುಳಾ ಮತ್ತು ರೇಣುಕಾ ಉತ್ತಮ ಸ್ನೇಹಿತರಾಗಿದ್ದು, ದಿಲ್ಶನ್‌ ಕೂಡ ಹಲವು ಬಾರಿ ರೇಣುಕಾ ಮನೆಗೆ ಭೇಟಿ ನೀಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 2010ರಲ್ಲಿ ರೇಣುಕಾ ಮತ್ತು ಅವರ ಪತಿ ಹೆಸರಲ್ಲಿ ಮನೆಯನ್ನು ಖರೀದಿಸಿದ್ದರು.ಇದು  ಕ್ರಿಕೆಟಿಗ ತಿಲಕರತ್ನೆ ದಿಲ್ಶಾನ್ ರವರ ವರಿಗೆ ತಿಳಿಯದೇ  ನಡೆದಿರುವ ಅಚಾತುರ್ಯವಾಗಿರಬಹುದು ತಪ್ಪಿದ್ದರೆ ಸರಿಪಡಿಸಿಕೊಳ್ಳುವದು  ಸೂಕ್ತ ನಿವೇನಂತಿರಾ?   

Share

Twitter Delicious Facebook Digg Stumbleupon Favorites More